Sunday 23 October 2022

"ಅಮಿತಮತಿ ಶ್ರೀಸುಮತೀಂದ್ರತೀರ್ಥ ಯತಿಸಾರ್ವಭೌಮರು"

ಶ್ರೀಹಂಸನಾಮಕನ ಸಾಕ್ಷಾತ್ ಪರಂಪರೆಯಲ್ಲಿ ಶ್ರೀಪದ್ಮನಾಭತೀರ್ಥರ- ಶ್ರೀಜಯತೀರ್ಥರ-ಶ್ರೀಕವೀಂದ್ರತೀರ್ಥರ ಪರಂಪರೆಯಲ್ಲಿ ಉದಿಸಿದ ಪೂರ್ಣಪ್ರಜ್ಞಮತದ ಪೂರ್ಣಚಂದ್ರಮರೇ ಶ್ರೀ ರಾಘವೇಂದ್ರಸ್ವಾಮಿಗಳವರ ಮಠದ ವಿಭೂತಿಪುರುಷ ಶ್ರೀಸುಮತೀಂದ್ರ ತೀರ್ಥರು. 

ಶ್ರೀಮದಾಚಾರ್ಯರ ಸತ್ಪರಂಪರೆಯ ಇತಿಹಾಸದಲ್ಲಿಯೇ  ವಿಶಿಷ್ಟಸ್ಥಾನವನ್ನು ಆಚಂದ್ರಾರ್ಕಪರ್ಯಂತ ಪಡೆದ ಅಪ್ರತಿಮ ಪ್ರತಿಭಾ ಸಂಪನ್ನ ಶಕಪುರುಷರು ಶ್ರೀಸುಮತೀಂದ್ರ ತೀರ್ಥರು. 

ಶ್ರೀರಾಘವೇಂದ್ರ ಗುರುಸಾರ್ವಭೌಮರ ವಂಶೋದ್ಭವರಾದ ಶ್ರೀಗಳು  ಶ್ರೀಮನ್ನ್ಯಾಯಸುಧಾದಿ ಉದ್ಗ್ರಂಥಗಳ ಪಾಠವನ್ನು  ಸಾಕ್ಷಾತ್ ಶ್ರೀರಾಘವೇಂದ್ರತೀರ್ಥ ಗುರುಸಾರ್ವಭೌಮರ  ಪದತಲದಲ್ಲಿ ಕುಳಿತು ಕೇಳಿದ ಗುರುರಾಜರ  ಸಾಕ್ಷಾತ್ ಶಿಷ್ಯರು. 

ಪೂರ್ವಾಶ್ರಮ ಹಾಗೂ ವಿದ್ಯಾಭ್ಯಾಸ 


ಶ್ರೀರಾಘವೇಂದ್ರತೀರ್ಥಗುರುಸಾರ್ವಭೌಮರ ಪೂರ್ವಾಶ್ರಮ ಅಣ್ಣಂದಿರಾದ ಶ್ರೀಗುರಾಜಾಚಾರ್ಯರ ಮಕ್ಕಳೇ ಶ್ರೀವೆಂಕಟನಾರಾಯಣಾಚಾರ್ಯರು. ಅವರಿಗೆ ಐದು ಜನ ಗಂಡು ಮಕ್ಕಳು. 


ಶ್ರೀವೇಂಕಣ್ಣಾಚಾರ್ಯರು, ಶ್ರೀವಾಸುದೇವಾಚಾರ್ಯರು, ಶ್ರೀಮುದ್ದುವೇಂಕಟಕೃಷ್ಣಾಚಾರ್ಯರು,  ಶ್ರೀವಿಜಯೀಂದ್ರಾಚಾರ್ಯರು ಹಾಗು ಶ್ರೀಗರುಡವಾಹನ ಲಕ್ಷ್ಮೀನಾರಾಯಣಾಚಾರ್ಯರು ಎಂದು. 


ಅವರೆಲ್ಲ ಕ್ರಮವಾಗಿ ಶ್ರೀಯೋಗೀಂದ್ರತೀರ್ಥರು , ಶ್ರೀಸೂರೀಂದ್ರತೀರ್ಥರು,  ಶ್ರೀಸುಮತೀಂದ್ರತೀರ್ಥರು, ಶ್ರೀಉಪೇಂದ್ರತೀರ್ಥರು, ಶ್ರೀಮುನೀಂದ್ರತೀರ್ಥರೆಂದು ಯತ್ಯಾಶ್ರಮ ಸ್ವೀಕರಿಸಿ ವೈರಾಗ್ಯಕ್ಕೆ ಹೆಸರಾದವರು. 


ಇವರಲ್ಲಿ ನಾಲ್ಕು ಜ್ಞಾನ ಶ್ರೀಮದಾಚಾರ್ಯರ ಪೀಠವನ್ನೇರಿದರೇ ಶ್ರೀಮುನೀಂದ್ರತೀರ್ಥರು ಬಿಡಿ ಸಂನ್ಯಾಸಿಗಳಾಗಿಯೇ ಇದ್ದು ಪೀಠಾಧಿಪತಿಗಳಾಗಲಿಲ್ಲ. 


ಇವರೆಲ್ಲರೂ ಶ್ರೀರಾಘವೇಂದ್ರಸ್ವಾಮಿಗಳವರಲ್ಲಿಯೇ ಅಧ್ಯಯನ ನಡೆಸಿದ ಭಾಗ್ಯಶಾಲಿಗಳು. ಶ್ರೀರಾಘವೇಂದ್ರವಿಜಯವು  

ಜನಕೋಪಮಕನ್ಯಕೇsನ್ವಯೇsಸ್ಮಿನ್ನಿಜತಾತಾಧಿಕನಂದನೇ ಗುಣೌಘೈಃ । 

ಅನುಜಾತಸಮಾನಪೂರ್ವಜಾತೇsಭವದೇಕೋ ಭುವಿಕೃಷ್ಣನಾಮಧಾಮಾ ।। 

                 (ಶ್ರೀರಾಘವೇಂದ್ರವಿಜಯ)  

ಎಂದು ಉಲ್ಲೇಖಿಸುವಂತೆ, ತಂದೆಯನ್ನೇ ಮೀರಿಸುವ ಮಕ್ಕಳು, ಗುಣಗಳಲ್ಲಿ ಅಣ್ಣನ ಸಮಾನನೆನಿಸುವ ತಮ್ಮಂದಿರು ಆ ವಂಶದಲ್ಲಿ ಅವತರಿಸುವವರು ಎಂಬ ಮಾತಿನಂತೆ ಎಲ್ಲರೂ ವಿಶಿಷ್ಟಪಾಂಡಿತ್ಯಪೂರ್ಣರೂ, ಗ್ರಂಥಕಾರರು ಎನ್ನುವುದು ವಿಶೇಷ. 

Monday 17 October 2022

"ವಸುಧಾತಲವಿಖ್ಯಾತ ಶ್ರೀವಸುಧೇಂದ್ರತೀರ್ಥರು"



    ಶ್ರೀಹಂಸನಾಮಕಪರಮಾತ್ಮನ, ಶ್ರೀಮಧ್ವ-ಪದ್ಮನಾಭ-ಶ್ರೀಜಯಾರ್ಯಾದಿ ಯತಿಗಳ ಸತ್ಪರಂಪರೆಯಲ್ಲಿ ಅವತರಿಸಿದ ಮಹಾತಪಸ್ವೀಗಳ ಸಾಲಿನಲ್ಲಿ ಅಗ್ರಗಣ್ಯರು ಶ್ರೀರಾಘವೇಂದ್ರಗುರುಸಾರ್ವಭೌಮರ ವಂಶೋದ್ಭವರಾದ ಶ್ರೀವಸುಧೇಂದ್ರತೀರ್ಥ ಶ್ರೀಪಾದಂಗಳವರು.  

    ಶ್ರೀರಾಘವೇಂದ್ರಗುರುಸಾರ್ವಭೌಮರ ಪೂರ್ವಾಶ್ರಮದ ಸದ್ವಂಶದಲ್ಲಿ, ಅವರ ಮರಿಮಕ್ಕಳಾಗಿ ಅವತರಿಸಿದವರೇ ಶ್ರೀವೇಣುಗೋಪಾಲಾಚಾರ್ಯರು. ಅವರು ಶ್ರೀವಾದೀಂದ್ರತೀರ್ಥರ ಪೂರ್ವಾಶ್ರಮ ತಮ್ಮಂದಿರೂ ಹೌದು. ಶ್ರೀವೇಣುಗೋಪಲಾಚಾರ್ಯರ ಜ್ಯೇಷ್ಠ ಮಕ್ಕಳೇ ಶ್ರೀಪುರುಷೋತ್ತಮಾಚಾರ್ಯರು. 


    ಶ್ರೀಪುರುಷೋತ್ತಮಾಚಾರ್ಯರೇ ಶ್ರೀವಾದೀಂದ್ರತೀರ್ಥರಿಂದ ಚತುರ್ಥಾಶ್ರಮ ಸ್ವೀಕರಿಸಿ "ಶ್ರೀವಸುಧೇಂದ್ರತೀರ್ಥ"ರಾದರು. ಅವರ ಅಪಾರ ಮಹಿಮೆ, ಅಪ್ರತಿಮ ಪಾಂಡಿತ್ಯ, ಮಹಾಸಂಸ್ಥಾನದ ಅಭಿವೃದ್ಧಿ, ಮಹೋನ್ನತವಾದ ವಿದ್ಯಾಪರೆಂಪರೆ,  ಗ್ರಂಥಕರ್ತರೆನಿಸುವ ಶಿಷ್ಯರ ನಿರ್ಮಾಣ, ಅಪಾರ ತಪಃ ಪ್ರಭಾವ, ವೈಭವದ ಶ್ರೀಮೂಲರಾಮಾರ್ಚನೆ, ಹರಿದಾಸಸಾಹಿತ್ಯದ ಪೋಷಣೆ ಶ್ರೀವಿಜಯದಾಸ, ಶ್ರೀಗೋಪಾಲದಾಸರು ಹಾಗೂ ಶ್ರೀಜಗನ್ನಾಥದಾಸರಿಗೆ ಅವರು ಮಾಡಿದ ಪರಮಾನುಗ್ರಹ ಹೀಗೆ ಹಲವು ರೀತಿಯಲ್ಲಿ ಶ್ರೀವಸುಧೇಂದ್ರತೀರ್ಥರ ಹೆಸರು ಚಿರಸ್ಥಾಯಿಯಾಗಿದೆ.



ಮಹಾಸಂಸ್ಥಾನವನ್ನು ಭದ್ರಪಡಿಸಿದ  ಮಹಾನುಭಾವರು:


ಶ್ರೀಗುರುಸಾರ್ವಭೌಮರ ಕಾಲದಲ್ಲಿ ಶ್ರೀಮಠಕ್ಕೆ ಜಹಗೀರು ನೀಡಿದ ಮಂತ್ರಾಲಯಗ್ರಾಮವು ಎಲ್ಲಿಯವರೆಯೆ ಶ್ರೀಮಠದ ಸುಪರ್ದಿಗೆ ಒಳಪಟ್ಟಿದ್ದು ಎನ್ನುವುದು ಸ್ಪಷ್ಟವಿರಲಿಲ್ಲ. ಹಲವು ರಾಜಕೀಯವಿಪ್ಲವಗಳ ಮಧ್ಯೆ ಹಲವು ಕಾಲ ಮಂತ್ರಾಲಯದಲ್ಲೇ ಉಳಿದು ಪಾಠ ಪ್ರವಚನಗಳನ್ನು ನಡೆಸಿ ತಮ್ಮ ಕಾಲದಲ್ಲಿ ಅಂದಿನ ಆದೋನಿಯ ನವಾಬ ಸಬ್ದಲ್ ಜಂಗ್ ಬಹಾದೂರ್ ನಲ್ಲಿ ಮಂತ್ರಾಲಯ ಗ್ರಾಮದ ಬಗ್ಗೆ ಭವಿಷ್ಯದ ಬಗ್ಗೆ ಯೋಚಿಸಿ ಸೂಕ್ತ ಕಾಗದ ಪ್ರತ್ರಗಳನ್ನು ಮಾಡಿಸಿ,ಮಂತ್ರಾಲಯವನ್ನು ಭದ್ರ ಪಡಿಸಿದರು. 


ಹಿಂದೆ ಶ್ರೀರಾಘವೇಂದ್ರಗುರುಗಳ ಕಾಲದಲ್ಲಿ ಶ್ರೀಮಠಕ್ಕೆ ಜಗಗೀರಾಗಿ ಲಭ್ಯವಾಗಿದ್ದ ಕಿರಿಟಗಿರಿಗ್ರಾಮವು ಬದಲಾದ ರಾಜಕೀಯ ಸನ್ನಿವೇಶದಿಂದ ಮಹಾಸಂಸ್ಥಾನದ ಕೈತಪ್ಪಿ ಹೋಗಿತ್ತು. ತಮ್ಮ ವಿಶಿಷ್ಟ ತಪಃ ಪ್ರಭಾವ, ಚರ್ಯೆಯಿಂದ ಶ್ರೀಗಳವರು ಅದನ್ನು ಮರಳಿ ಸಂಸ್ಥಾನಕ್ಕೆ ಬರುವಂತೆ ಮಾಡಿದರು. ಇದಲ್ಲದೇ ಇನ್ನು ಹತ್ತು ಹಲವು ಗ್ರಾಮಗಳನ್ನು ಶ್ರೀಮೂಲರಾಮದೇವರ ಸೇವಾರ್ಥವಾಗಿ ಶ್ರೀಮಠಕ್ಕೆ  ಭದ್ರಪಡಿಸಿದ್ದಲ್ಲದೇ ಅನೇಕ ರಾಜರಿಂದ, ಪಾಳೆಯಗಾರರಿಂದ ಸಮ್ಮಾನಿತರಾಗಿ ಅನೇಕ ಗ್ರಾಮಗಳನ್ನು ದಾನಪಡೆದು ಸಂಸ್ಥಾನಕ್ಕೆ ಅರ್ಪಿಸುವ ವರ್ಚಸ್ಸು ಶ್ರೀಗಳವರಿಗೆ ಇದ್ದಿತ್ತು. 

"ಮಧ್ವೋಪದಿಷ್ಟ ಮೂಲರಾಮ ಪ್ರತಿಮಾ ಪ್ರಭಾವ" - ಶ್ರೀರಾಘವೇಂದ್ರವಿಜಯದ ದಾಖಲೆ

ಶ್ರೀರಾಘವೇಂದ್ರಸ್ವಾಮಿಗಳವರ ಮಂಗಲಕರ ಚರಿತ್ರೆಯನ್ನು ತಿಳಿಸುವ ಮಹತ್ಕೃತಿಯಾದ ಶ್ರೀರಾಘವೇಂದ್ರವಿಜಯವು ಸ್ವತಃ ಶ್ರೀರಾಘವೇಂದ್ರಸ್ವಾಮಿಗಳವರೇ ಅವಲೋಕಿಸಿ ಅನುಮೋದಿಸಿದ ಮಹತ್ಕ...