ಸಂಗ್ರಹ: ಸಮೀರ ಜೋಶಿ
ದ್ವೈತ ವೇದಾಂತವು ಜಗದ್ಗುರು ಶ್ರೀಮನ್ ಮಧ್ವಾಚಾರ್ಯರು ಪ್ರತಿಪಾದಿಸಿದ ತತ್ವ . 12 ನೆ ಶತಮಾನದಲ್ಲಿ ಮಧ್ಯಗೇಹ ಭಟ್ಟ ಹಾಗು ವೇದವತಿ ದಂಪತಿಗಳಿಗೆ ವಾಸುದೇವ ಎಂಬ ಹೆಸರಿನಿಂದ ಜನಿಸಿದ ಸಾಕ್ಷಾತ್ ವಾಯುದೆವರು , ಮುಂದೆ ಅಚ್ಯುತಪ್ರೇಕ್ಷ ( ಪ್ರಜ್ಞ ) ರಿಂದ ಸನ್ಯಾಸ ಸ್ವೀಕಾರ ಮಾಡಿ ಪೂರ್ಣಪ್ರಜ್ಞರಾಗಿ ಮುಂದೆ ವಾದಿವಿಜಯರಾಗಿ ಎಲ್ಲರಿಗು ಸದ್ವೈಷ್ಣವ ಸಿದ್ಧಾಂತವನ್ನು ಬೋಧಿಸಿ , ದ್ವೈತವನ್ನು ಪುನರುತ್ಥಾನಗೊಳಿಸಿ , ಎಲ್ಲರಿಗೂ ಆನಂದವನ್ನು ಉಂಟು ಮಾಡಿ ಆನಂದತೀರ್ಥರೆನಿಸಿ , ಮುಂದೆ ಅನೇಕ ಗ್ರಂಥರತ್ನಗಳನ್ನೂ ವಿರಚಿಸಿ, ಪರಿಶುದ್ಧ ತತ್ತ್ವವನ್ನು ಕರುಣಿಸಿ ಮಧ್ವಾಚಾರ್ಯರಾಗಿ ಲೋಕವನ್ನೇ ಸಲಹುತ್ತಿದ್ದಾರೆ.
Wednesday 30 August 2023
"ಶ್ರೀರಾಘವೇಂದ್ರ ನಿಮ್ಮ ಚಾರು ಚರಣವ "
ಸಂಗ್ರಹ: ಸಮೀರ ಜೋಶಿ
Saturday 12 August 2023
ದಿನಕರನುದಿಸಿದನು…. ಧರೆಯೊಳಗೆ…. ಶ್ರೀರಾಘವೇಂದ್ರವಿಜಯಕಾರರ ದೃಷ್ಟಿಯಲ್ಲಿ
ಶ್ರೀ ಧೀರೇಂದ್ರ ತೀರ್ಥರು
|| ಶ್ರೀಮನ್ಮೂಲರಾಮೋ ವಿಜಯತೆ || ||ಶ್ರೀಗುರುರಾಜೋ ವಿಜಯತೆ||
ಪೂರ್ವಾಶ್ರಮ-
ಶ್ರೀಮನ್ಮಧ್ವಾಚಾರ್ಯರ ಮೂಲ ಮಹಾ ಸಂಸ್ಥಾನ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠದ ದಿಗ್ವಿಜಯ ವಿದ್ಯಾಸಿಂಹಾಸನಾಧೀಶ್ವರರಾದ ಶ್ರೀ ಶ್ರೀ ೧೦೦೮ ಶ್ರೀ ಧೀರೇಂದ್ರ ತೀರ್ಥರ ಬಗ್ಗೆ ಮಾತನಾಡಲು ನನ್ನ ಯೋಗ್ಯತೆ ಸಾಲದು. ಶ್ರೀ ರಾಘವೇಂದ್ರ ಗುರುಗಳ ಪರಮಾನುಗ್ರಹಕ್ಕೆ ಪಾತ್ರರಾಗಿದ್ದ ಶ್ರೀ ವಾದೀಂದ್ರ ತೀರ್ಥರ ಗುರುಸರ್ವಭೌಮರ ಪೂರ್ವಾಶ್ರಮ ಪುತ್ರರ ಹೆಸರು ಶ್ರೀ ಜಯರಾಮಚಾರ್ಯರು ಎಂದು. ಶ್ರೀ ಜಯರಾಮಾಚಾರ್ಯರು ತಮ್ಮ ಸಕಲ ವಿದ್ಯಾಭ್ಯಾಸಗಳನ್ನು ತಮ್ಮ ತಂದೆಗಳಾದ ಶ್ರೀ ಶ್ರೀನಿವಾಸಾಚಾರ್ಯರಲ್ಲಿ ಅರ್ಥಾತ್ ಶ್ರೀಮದಾಚಾರ್ಯರ ಪೀಠವನ್ನು ಶ್ರೀಮದುಪೇಂದ್ರ ತೀರ್ಥರ ನಂತರ ಆಳಿದ ಶ್ರೀ ವಾದೀಂದ್ರ ತೀರ್ಥ ಗುರುಸರ್ವಭೌಮರಲ್ಲೇ ಆಯಿತು. ಅವರಲ್ಲಿ ಜನ್ಮ ಪಡೆಯುವದಲ್ಲದೇ ಅವರಲ್ಲೇ ವಿದ್ಯಾಭ್ಯಾಸ ಮಾಡಿದ ಮಹಾ ಭಾಗ್ಯ ಶ್ರೀ ಧೀರೇಂದ್ರ ತೀರ್ಥ ಶ್ರೀಪಾದಂಗಳವರದ್ದು. ಆಚಾರ್ಯರು ಶ್ರೀ ವಾದೀಂದ್ರ ತೀರ್ಥರ ಪರಮಾನುಗ್ರಹದಿಂದ ವಿಲಕ್ಷಣ ಪಾಂಡಿತ್ಯ ಗಳಿಸಿ ಪೂರ್ವಾಶ್ರಮದಲ್ಲೇ ದೇಶದ ಉದ್ದಗಲಕ್ಕೂ ಸಂಚರಿಸಿ ವಾದಿ ದಿಗ್ವಿಜಯ , ಶ್ರೀಮದಾಚಾರ್ಯರ ಸಿದ್ಧಾಂತ ಮಂಡನೆ ಇತ್ಯಾದಿಗಳನ್ನು ಮಾಡಿ ಸಂಸ್ಥಾನದ ಸೇವೆಗೈಯುತ್ತಿದ್ದರು. ಶ್ರೀ ವಾದೀಂದ್ರ ತೀರ್ಥರು ತತ್ವಪ್ರಕಾಶಿಕಾ ಟಿಪ್ಪಣಿಯಾದ 'ಮೀಮಾಂಸಾ ನಯದರ್ಪಣ' , 'ತತ್ವೊದ್ಯೋತ ಟಿಪ್ಪಣಿ ', 'ಭೂಗೋಳ-ಖಗೋಳ ವಿಚಾರಃ' , ' ಜಗದ್ಗುರು ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀ ರಾಘವೇಂದ್ರ ಮಠಾರ್ಚಾ ಗತಿಕ್ರಮ' , 'ಗುರುಗುಣಸ್ತವನಂ','ನವ್ಯದುರುಕ್ತಿ ಶಿಕ್ಷಾ (ಪೂರ್ವಾಶ್ರಮದಲ್ಲಿ ರಚಿಸಿದ್ದು)' ಹೀಗೆ ಅನೇಕ ಪ್ರೌಢ ಗ್ರಂಥಗಳನ್ನು ರಚಿಸಿದ್ದಾರೆ. ಅದರಲ್ಲಿ ಶ್ರೀ ರಾಘವೇಂದ್ರ ಗುರುಗಳ ಗ್ರಂಥರಚನ ಶೈಲಿ , ಸಾಮರ್ಥ್ಯ , ಮಹತ್ವ ಎಲ್ಲವನ್ನೂ ವಿಶಿಷ್ಟವಾಗಿ ಸ್ತವನ ಮಾಡುವ ಕೃತಿಯೇ "ಶ್ರೀಗುರುಗುಣಸ್ತವನ" . ಇದನ್ನು ಶ್ರೀ ವಾದೀಂದ್ರ ತೀರ್ಥರು ಶ್ರೀ ಗುರುಸಾರ್ವಭೌಮರಿಗೆ ಸಮರ್ಪಿಸಿದಾಗ ಶ್ರೀರಾಯರ ಮೂಲಬೃಂದಾವನವು ಅವರ ಸಮ್ಮತಿ ತಿಳಿಸಲು ಅಲುಗಾಡಿತು. ಅಂತಹ ಮಾಹಾನುಭಾವರು,ರಾಯರನ್ನು ಅರಿತವರು ಶ್ರೀ ವಾದೀಂದ್ರ ತೀರ್ಥರು. ಶ್ರೀ ಜಯರಾಮಚಾರ್ಯರು ಪ್ರೌಢಾವಸ್ಥೆಯಲ್ಲಿಯೇ 'ಗುರುಗುಣಸ್ತವನ'ದಲ್ಲಿ ಉತ್ಸುಕರಾಗಿ ,ಅದನ್ನು ಆಮೂಲಾಗ್ರವಾಗಿ ಅಧ್ಯಯನ ಮಾಡಿ ಅದಕ್ಕೆ ತಮ್ಮದೇ ಒಂದು ಪ್ರೌಢ ವ್ಯಾಖ್ಯಾನ ರಚನೆ ಮಾಡಿ ಶ್ರೀ ವಾದೀಂದ್ರ ತೀರ್ಥ ಗುರುಸಾರ್ವಭೌಮರಲ್ಲಿ ಅದನ್ನು ಸಮರ್ಪಿಸಿದರು ( ಇದೆ ಗ್ರಂಥಕ್ಕೆ ಶ್ರೀ ವಾದೀಂದ್ರ ತೀರ್ಥರ ಪಟ್ಟದ ಶಿಷ್ಯ ಶ್ರೀ ವಸುಧೇಂದ್ರ ತೀರ್ಥರ ವ್ಯಾಖ್ಯಾನವೂ ಇದೆ ) . ಆಗ ಶ್ರೀ ವಾದೀಂದ್ರ ತೀರ್ಥರು , ತಮ್ಮ ಪೂರ್ವಾಶ್ರಮ ಪುತ್ರರೂ ಹಾಗು ಸಂಸ್ಥಾನದ ಮಹಾ ಮೇಧಾವಿಗಳೂ ಆಗಿರುವ ಇವರು ಪೀಠಕ್ಕೆ ಬಂದರೆ ಸಂಸ್ಥಾನದ ಶ್ರೇಯೋಭಿವೃದ್ಧಿ ಆಗುವದು ಅನ್ನುವದನ್ನ ಅರಿತು ಆಚಾರ್ಯರಿಗೆ ಸೂಕ್ಷ್ಮವಾಗಿ " ಜಯರಾಮ ! ಇಷ್ಟಾದರೆ ಸಾಲದಪ್ಪ ನಿಜವಾದ ವೈರಾಗ್ಯ ಬೇಕು " ಎಂದು ನುಡಿದರು.
ಶ್ರೀ ಜಯರಾಮಚಾರ್ಯರು , ಶ್ರೀ ವಾದೀಂದ್ರರ ಮಾತಿನಂತೆ ವೈರಾಗ್ಯವನ್ನನುಸರಿಸುತ್ತ ಸಂಚಾರ ಪ್ರಾರಂಭ ಮಾಡಿದರು . ಇತ್ತ ಕಾಲ ಕ್ರಮೇಣ ಶ್ರೀ ವಾದೀಂದ್ರ ತೀರ್ಥರು , ಶ್ರೀ ವಸುಧೇಂದ್ರ ತೀರ್ಥರಿಗೆ ಮಹಾ ಸಂಸ್ಥಾನ ಒಪ್ಪಿಸಿ ಮಂತ್ರಾಲಯದಲ್ಲಿ ಶ್ರೀ ಗುರುರಾಜರ ವೃಂದಾವನದ ಪಕ್ಕದಲ್ಲಿ , ಶ್ರೀ ಗುರುರಾಜರಿಗಾಗಿಯೇ ಸಂಕಲ್ಪಿಸಿದ ವೃಂದಾವನವನ್ನು , ಗುರುರಾಜರ ಅಣತಿಯಂತೆ , ಆದೇಶದಂತೆ ಶ್ರೀ ವಾದೀಂದ್ರ ತೀರ್ಥರು ಪ್ರವೇಶಿಸಿದರು. ಈ ಘಟನೆಯೊಂದೆ ಸಾಕು ಗುರುರಾಜರು ಶ್ರೀ ವಾದೀಂದ್ರ ತೀರ್ಥರ ಮೇಲೆ ಅದೆಷ್ಟು ಪ್ರೀತಿ ತೋರಿದ್ದಾರೆ ? ಅದೆಷ್ಟು ಅನುಗ್ರಹ ಮಾಡಿದ್ದಾರೆ ? ಅಂತ ತಿಳಿಯಲು. ಹೀಗೆ ಶ್ರೀ ವಾದೀಂದ್ರ ತೀರ್ಥರು ವೃಂದಾವನಸ್ಥರಾದ ವಿಷಯ ಕೇಳಿ ಶ್ರೀ ಜಯರಾಮಚರ್ಯರಿಗೆ ಸಿಡಿಲು ಬಡಿದಂತಾಗಿ ಅನಾಥ ಪ್ರಜ್ಞೆ ಮೂಡಿತು. ಆಚಾರ್ಯರ ವೈರಾಗ್ಯವೃದ್ದಿಗೆ ಇದು ಸಹ ಕಾರಣವಾಯಿತು .
"ಮಧ್ವೋಪದಿಷ್ಟ ಮೂಲರಾಮ ಪ್ರತಿಮಾ ಪ್ರಭಾವ" - ಶ್ರೀರಾಘವೇಂದ್ರವಿಜಯದ ದಾಖಲೆ
ಶ್ರೀರಾಘವೇಂದ್ರಸ್ವಾಮಿಗಳವರ ಮಂಗಲಕರ ಚರಿತ್ರೆಯನ್ನು ತಿಳಿಸುವ ಮಹತ್ಕೃತಿಯಾದ ಶ್ರೀರಾಘವೇಂದ್ರವಿಜಯವು ಸ್ವತಃ ಶ್ರೀರಾಘವೇಂದ್ರಸ್ವಾಮಿಗಳವರೇ ಅವಲೋಕಿಸಿ ಅನುಮೋದಿಸಿದ ಮಹತ್ಕ...
-
ಶ್ರೀಶ್ರೀವರದೇಂದ್ರತೀರ್ಥ ಗುರುಭ್ಯೋ ನಮಃ ವಾದೇ ವಿಜಯಶೀಲಾಯ ವರದಾಯ ವರಾರ್ಥಿನಾಮ್ । ವದಾನ್ಯಜನಸಿಂಹಾಯ ವರದೆಂದ್ರಾಯ ತೇ ನಮಃ ।। ಸನ್ಯಾಸಿಗಳ ಕರ್ತವ್ಯ ಪರಮತಖಂ...
-
ಶ್ರೀಮನ್ಮೂಲರಾಮೋ ವಿಜಯತೆ ಶ್ರೀಗುರುರಾಜೋ ವಿಜಯತೆ ಪೂರ್ವಾಶ್ರಮ- ...