ಶ್ರೀಮದಾಚಾರ್ಯರ ಪೀಠದ ಮೇಲೆ ವಿರಾಜಮಾನರಾದ ಶ್ರೀಧೀರೇಂದ್ರತೀರ್ಥರ ವಿದ್ಯಾಶಿಷ್ಯರಾದವರು ಶ್ರೀಭುವನೇಂದ್ರತೀರ್ಥರು..
ದ್ವೈತ ವೇದಾಂತವು ಜಗದ್ಗುರು ಶ್ರೀಮನ್ ಮಧ್ವಾಚಾರ್ಯರು ಪ್ರತಿಪಾದಿಸಿದ ತತ್ವ . 12 ನೆ ಶತಮಾನದಲ್ಲಿ ಮಧ್ಯಗೇಹ ಭಟ್ಟ ಹಾಗು ವೇದವತಿ ದಂಪತಿಗಳಿಗೆ ವಾಸುದೇವ ಎಂಬ ಹೆಸರಿನಿಂದ ಜನಿಸಿದ ಸಾಕ್ಷಾತ್ ವಾಯುದೆವರು , ಮುಂದೆ ಅಚ್ಯುತಪ್ರೇಕ್ಷ ( ಪ್ರಜ್ಞ ) ರಿಂದ ಸನ್ಯಾಸ ಸ್ವೀಕಾರ ಮಾಡಿ ಪೂರ್ಣಪ್ರಜ್ಞರಾಗಿ ಮುಂದೆ ವಾದಿವಿಜಯರಾಗಿ ಎಲ್ಲರಿಗು ಸದ್ವೈಷ್ಣವ ಸಿದ್ಧಾಂತವನ್ನು ಬೋಧಿಸಿ , ದ್ವೈತವನ್ನು ಪುನರುತ್ಥಾನಗೊಳಿಸಿ , ಎಲ್ಲರಿಗೂ ಆನಂದವನ್ನು ಉಂಟು ಮಾಡಿ ಆನಂದತೀರ್ಥರೆನಿಸಿ , ಮುಂದೆ ಅನೇಕ ಗ್ರಂಥರತ್ನಗಳನ್ನೂ ವಿರಚಿಸಿ, ಪರಿಶುದ್ಧ ತತ್ತ್ವವನ್ನು ಕರುಣಿಸಿ ಮಧ್ವಾಚಾರ್ಯರಾಗಿ ಲೋಕವನ್ನೇ ಸಲಹುತ್ತಿದ್ದಾರೆ.
Saturday, 12 August 2023
ಶ್ರೀಭುವನೇಂದ್ರತೀರ್ಥ ಶ್ರೀಪಾದಂಗಳವರು
'ಜಗದ್ಗುರು ಶ್ರೀಸುಧೀಂದ್ರತೀರ್ಥರು'
ರಾಜಾಧಿರಾಜ-ಕೋಟಿರ-ಕೋಟಿ-ಕೂಟಾರ್ಚಿತಾಂಘ್ರಯೇ ಶ್ರೀಸುಧೀಂದ್ರಯತಯೇ ನಮೋ ನಮಃ
ಶ್ರೀಮಧ್ವಾಚಾರ್ಯರ ವಿದ್ಯಾಸಿಂಹಾನಾಧೀಶ್ವರರಾದ ಶ್ರೀಸುಧರ್ಮೇಂದ್ರತೀರ್ಥ ಶ್ರೀಪಾದಂಗಳವರು : ಶ್ರೀಕೃಷ್ಣಾವಧೂತರು ಕಂಡಂತೆ
"ಸುಧರ್ಮೇಂದ್ರತೀರ್ಥರ ಶ್ರೀರಾಮದೇವರ ಪೂಜೆಯನ್ನು ನೋಡಲು ಸಾಕ್ಷಾತ್ ಇಂದ್ರದೇವರೇ ಭುವಿಗೆ ಬರುತ್ತಾರೆ"
ಸೋದಾಪುರಾಧೀಶ ಭಾವೀಮುಖ್ಯಪ್ರಾಣರಾದ ಶ್ರೀಮದ್ವಾದಿರಾಜಪ್ರಭುಗಳು
"ಸವಿನೋದಂ ಸಾಟ್ಟಹಾಸಂ ಸಸ್ಮಿತಂ ಸುಸ್ವರಾನ್ವಿತಮ್ |ಸರಹಸ್ಯಂ ಸಪ್ರಮಾಣಂ ವಾದಿರಾಜವಚೋsಮೃತಮ್ ||"
Wednesday, 9 August 2023
ಶ್ರೀವರದೇಂದ್ರ ಗುರುವೈಭವ - ಶ್ರೀವರದೇಂದ್ರರ ಪುಣೆ ದಿಗ್ವಿಜಯಯಾತ್ರೆಯ ಪ್ರಸಂಗ
ಶ್ರೀಶ್ರೀವರದೇಂದ್ರತೀರ್ಥ ಗುರುಭ್ಯೋ ನಮಃ
ವಾದೇ ವಿಜಯಶೀಲಾಯ ವರದಾಯ ವರಾರ್ಥಿನಾಮ್ ।
ವದಾನ್ಯಜನಸಿಂಹಾಯ ವರದೆಂದ್ರಾಯ ತೇ ನಮಃ ।।
ಸನ್ಯಾಸಿಗಳ ಕರ್ತವ್ಯ ಪರಮತಖಂಡನಪೂರ್ವಕ-ಸ್ವಮತಪ್ರತಿಷ್ಠಾಪನವೇ ಆಗಿದೆ. ಶ್ರೀವರದೇಂದ್ರ ಗುರುರಾಜರು ಇದನ್ನು ಮೈಗೂಡಿಸಿಕೊಂಡು ಸದ್ವೈಷ್ಣವಸಿದ್ಧಾಂತಪ್ರತಿಷ್ಠಾಪನಾಚಾರ್ಯ ಎನ್ನುವ ಬಿರುದಿಗೆ ಅನ್ವರ್ಥದಂತಿದ್ದವರು.
| ಶ್ರೀವರದೇಂದ್ರತೀರ್ಥರ ಮೂಲ ವೃಂದಾವನ, ಪುಣೆ |
ಅವರು ಒಮ್ಮೆ ಪುಣ್ಯನಗರಿ ( ಪುಣೆ) ಗೆ ದಿಗ್ವಿಜಯ ಮಾಡಿಸಿದರಂತೆ. ಅಲ್ಲಿನ ದಿಗ್ವಿಜಯ ಯಾತ್ರೆ ಶ್ರೀವರದೇಂದ್ರರು ಸಾಧಿಸಿದ ದಿಗ್ವಿಜಯಗಳಲ್ಲಿ ಅತ್ಯಂತ ಪ್ರಸಿದ್ಧ ಜನನಿತವಾದ ದಿಗ್ವಿಜಯ. ಇದನ್ನು ಶ್ರೀವದೇಂದ್ರರನ್ನು ಸಾಕ್ಷಾತ್ತಾಗಿ ಕಂಡ, ಅವರ ಅನುಗ್ರಹ ಪಡೆದ ಧನ್ಯಾತ್ಮರಾದ ಶ್ರೀಪ್ರಾಣೇಶದಾಸರು ಹಾಗೂ ಮುಂದಿನ ಪೀಳಿಗೆಯವರಾದ ಶ್ರೀವರದೇಶವಿಠಲರು ದಾಖಲಿಸಿದ್ದಾರೆ. ಶ್ರೀವರದೇಶದಾಸರಂತೂ ಈ ಸಂಪೂರ್ಣ ಘಟನೆಯ ಚಿತ್ರಣವನ್ನೇ ಕಣ್ಣಿಗೆ ಕಟ್ಟುವಂತೆ ಬಣ್ಣಿಸಿದ್ದಾರೆ.
"ಇನಿತು ಪೇಳಿ ಸಂಸೇವಿತರಾಗುತ ಮುನಿಗಳು ತೆರಳಿದರು ಹರುಷದಲಿ ।।
ಪುಣೆಯ ಸೇರಿದರು ದುರ್ವಾದಿಯ ಮತವನು ದಿಗ್ವಿಜಯಿಪ ಇಚ್ಛೆಯಲೀ ।। "
ಎಂದು ಶ್ರೀವರದೇಂದ್ರ ಪುಣೆ ದಿಗ್ವಿಜಯಯಾತ್ರೆಯ ಪ್ರಸಂಗವನ್ನು ಉಲ್ಲೇಖಿಸಿದ್ದಾರೆ.
ಇದು ಕೇವಲ ದಂತೆಕಥೆಯಾಗಿರದೇ ಇತಿಹಾಸದ ಪುಟಗಳಲ್ಲಿ ದಾಖಲಾದ ನಿಚ್ಚಳ ಚರಿತ್ರೆಯಾಗಿದೆ. ಇತಿಹಾಸದ ಪುಟಗಳಲ್ಲಿ ಹೊಕ್ಕು ನೋಡಿದಾಗ, ಈ ಪ್ರಭುಣೆ ರಾಮಶಾಸ್ತ್ರಿಗಳ ಬಗ್ಗೆ ಹಲವು ಆಯಾಮಗಳಲ್ಲಿ ಮಾಹಿತಿ ದೊರೆಯುತ್ತದೆ.
ಈ ಪ್ರಭುಣೆ ರಾಮಶಾಸ್ತ್ರಿಗಳು ೧೮ನೇ ಶತಮಾನದ ಉತ್ತರಾರ್ಧದ ಕಾಲಘಟ್ಟದಲ್ಲಿ ಮರಾಠಾ ಸಾಮ್ರಾಜ್ಯದ ಪೇಶ್ವೆಯವರ ಮುಖ್ಯ ನ್ಯಾಯಾಧೀಶರಾಗಿದ್ದವರು ( ಅಥವಾ ಪಂತ್ ನ್ಯಾಯಾಧೀಶ್).
"ಮಧ್ವೋಪದಿಷ್ಟ ಮೂಲರಾಮ ಪ್ರತಿಮಾ ಪ್ರಭಾವ" - ಶ್ರೀರಾಘವೇಂದ್ರವಿಜಯದ ದಾಖಲೆ
ಶ್ರೀರಾಘವೇಂದ್ರಸ್ವಾಮಿಗಳವರ ಮಂಗಲಕರ ಚರಿತ್ರೆಯನ್ನು ತಿಳಿಸುವ ಮಹತ್ಕೃತಿಯಾದ ಶ್ರೀರಾಘವೇಂದ್ರವಿಜಯವು ಸ್ವತಃ ಶ್ರೀರಾಘವೇಂದ್ರಸ್ವಾಮಿಗಳವರೇ ಅವಲೋಕಿಸಿ ಅನುಮೋದಿಸಿದ ಮಹತ್ಕ...
-
ಶ್ರೀಮನ್ಮೂಲರಾಮೋ ವಿಜಯತೆ ಶ್ರೀಗುರುರಾಜೋ ವಿಜಯತೆ ಪೂರ್ವಾಶ್ರಮ- ...
-
ರಾಮನ ನೋಡಿರೈ.... ರಾಮನ ನೋಡಿರೈ .... ತನ್ನ ಭಕ್ತಸಮೂಹವನ್ನು ಪಾಪಸಮುದ್ರದಿಂದ ತಾರಣ ಮಾಡಿಸಿ ರಕ್ಷಿಸಲಿಚ್ಛಿಸಲೆಂದು ಪರಮಕಾರುಣ್ಯದಿಂದ ಭಗವಂತ ಎತ್ತಿದ ಅವತಾರವೇ ಶ್ರೀರ...
-
ಶ್ರೀಶ್ರೀವರದೇಂದ್ರತೀರ್ಥ ಗುರುಭ್ಯೋ ನಮಃ ವಾದೇ ವಿಜಯಶೀಲಾಯ ವರದಾಯ ವರಾರ್ಥಿನಾಮ್ । ವದಾನ್ಯಜನಸಿಂಹಾಯ ವರದೆಂದ್ರಾಯ ತೇ ನಮಃ ।। ಸನ್ಯಾಸಿಗಳ ಕರ್ತವ್ಯ ಪರಮತಖಂ...
Subscribe Us
Popular Posts
-
|| श्री मन्मूल रामो विजयते || ಶ್ರೀ ಜಗದ್ಗುರು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾ ಸಂಸ್ಥಾನ ಶ್ರೀ ರಾಘವೇಂದ್ರ ಸ್ವಾಮಿಗಳವರ ಮಠ ವಿದ್ಯಾ ಮ...
-
ಸಕಲವಿದಜನಕುಮುದವನ ಕೌಮುದೀಶರು ಶ್ರೀಸುರೇಂದ್ರತೀರ್ಥರು ಯಶ್ಚಕಾರೋಪವಾಸೇನ ತ್ರಿವಾರಂ ಭೂಪ್ರದಕ್ಷಿಣಮ್ । ತಸ...